September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MLC ಐವನ್ ಡಿಸೋಜರ ಮನವಿಗೆ ತಕ್ಷಣ ಸ್ಪಂದಿಸಿ ಪರಿಹಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಜೋಯ್ಸನ್, ಸೂರಜ್ ಹಾಗೂ ಲಾರೆನ್ಸ್ ಫೆರ್ನಾಂಡಿಸ್ ಇವರು ಬೆಳ್ತಂಗಡಿ ತಾಲೂಕಿನ ಬರ್ಕಾಜೆ ಡ್ಯಾಮ್ ವೀಕ್ಷಿಸಲು ಹೋಗಿ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹಾಗೂ ಮಂಗಳೂರಿನ ಕುಲಶೇಖರದ ನಿವಾಸಿಯಾಗಿರುವ ವಿನ್ಸೆಂಟ್ ಡಿಸೋಜಾ ಪೈಂಟಿಂಗ್ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ಇವರು ವಿವರಿಸಿ., ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ನೀಡಿ ವಿನಂತಿಸಿದಾಗ, ಮನವಿಗೆ ಮಾನ್ಯ ಮುಖ್ಯಮಂತ್ರಿಗಳು ತಕ್ಷಣ ಸ್ಪಂದಿಸಿ ಈ ಕುಟುಂಬದ ಆಧಾರ ಸ್ತಂಭವಾಗಿದ್ದ ಯುವಕರ ಕೌಟುಂಬಿಕ ಹಿನ್ನೆಲೆಯನ್ನು ಗಮನಿಸಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿಯಂತೆ ಪರಿಹಾರವಾಗಿ ನೀಡಲು ಆದೇಶಿಸಿರುತ್ತಾರೆ.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page