September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವವಾಹಿನಿ ಬಂಟ್ವಾಳ ವತಿಯಿಂದ ಯಶಸ್ವಿ25 ನೇ ಗುರುತತ್ವವಾಹಿನಿ ಮಾಲಿಕೆ

ಅನುಷ್ಠಾನ ಪೂಜೆಯೇ ನಾರಾಯಣಗುರುಗಳ ಇಷ್ಟ ಪೂಜೆ – ಡಾ. ಯೋಗೀಶ್ ಕೈರೋಡಿ

ಬಂಟ್ವಾಳ : ದೇವರಿಗೆ ನಮ್ಮ ನಂಬಿಕೆಯ ಬಹುಬಗೆಯ ಪೂಜೆಯ ಪರಿಕಲ್ಪನೆಯಿದೆ. ಗುರುಗಳ ತತ್ವ ಅನುಷ್ಠಾನ ಪೂಜೆಯೇ ಅವರ ಇಷ್ಟ ಪೂಜೆ, ನಾರಾಯಣ ಗುರುಗಳ ಸಂದೇಶಗಳು ಕೇವಲ ಘೋಷಣೆಯ ಸಾಲುಗಳಲ್ಲ. ಅದು ನಮ್ಮ ಅಂತರಂಗದ ಭಾವವಾಗಬೇಕು.  ಅಧ್ಯಯನ, ಆತ್ಮಾವಲೋಕನ ಮತ್ತು ಸುತ್ತಲಿನ ಜನಜೀವನವನ್ನು   ವಿವೇಚಿಸಿದಾಗ ನಾರಾಯಣಗುರು ನಮ್ಮ ಅರಿವಿಗೆ ಬರುತ್ತಾರೆ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹಾಗೂ ಸುರೇಶ್ ಸುವರ್ಣ ಇವರ ಸುವರ್ಣಕೇದಗೆ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 25ರ ಗುರುಸಂದೇಶ ನೀಡಿದರು.

ಸಂಸ್ಕೃತಿ ಮತ್ತು ಸಂಸ್ಕಾರಗಳ ಅಡಿಪಾಯದಲ್ಲಿ ನಮ್ಮ ಜೀವನ ಸಾಗುತ್ತಿದೆ. ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರಗಳೊಂದಿಗೆ ಸಂಪ್ರದಾಯಗಳ ಬಗ್ಗೆ ಗುರುತತ್ವವಾಹಿನಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ. ಈ ನಿಟ್ಟಿನಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯ ಶ್ಲಾಘನೀಯ ಎಂದು ಗುರುತತ್ವವಾಹಿನಿ ಕಾರ್ಯಕ್ರಮಕ್ಕೆ ದ್ವನಿವರ್ದಕವನ್ನು ಕೊಡುಗೆಯಾಗಿ ನೀಡಿದ 2025ನೇ ಸಾಲಿನ ಕೋಟಿ ಚೆನ್ನಯ ಕ್ರೀಡೋತ್ಸವದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ತಿಳಿಸಿದರು. ಅತಿಥಿ ಡಾ. ಯೋಗೀಶ್ ಕೈರೋಡಿ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಇವರನ್ನು ಸುವರ್ಣಕೇದಗೆ ಕುಟುಂಬಿಕರ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಗೀತ ವಾದಕರಾದ ರಾಜೇಶ್ ಅಮ್ಟೂರು, ಯುವವಾಹಿನಿ ಬಂಟ್ವಾಳ ಘಟಕದ ಪ್ರಥಮ ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ನಿರ್ದೇಶಕ ಮಹೇಶ್ ಬೊಳ್ಳಾಯಿ, ಮಧುಸೂಧನ್ ಮಧ್ವ, ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕರ್ಕೇರ, ನಾಗೇಶ್ ಪೊನ್ನೊಡಿ, ಶಿವಾನಂದ ಎಂ., ಅರುಣ್ ಬಿ.ಸಿ. ರೋಡ್, ರಾಜೇಶ್ ಸುವರ್ಣ, ಸದಸ್ಯರಾದ ಜಗನ್ನಾಥ್ ಸುವರ್ಣ ಕಲ್ಲಡ್ಕ, ಶೈಲೇಶ್ ಕುಚ್ಚಿಗುಡ್ಡೆ, ಅರ್ಜುನ್ ಅರಳ, ಸುನಿತಾ ನಿತಿನ್ ಮಾರ್ನಬೈಲ್, ಸುಲತಾ ಬಿ.ಸಿ. ರೋಡ್, ಯಶೋಧರ ಕಡಂಬಳಿಕೆ, ರಚನಾ ಕರ್ಕೇರ, ಸುರೇಶ್ ಸುವರ್ಣ, ಮಲ್ಲಿಕಾ ಸುರೇಶ್ ಕರ್ಪೆ, ಪ್ರಶಾಂತ್ ಏರಮಲೆ, ಯೋಗೀಶ್ ಕರ್ಪೆ, ರತ್ನಾಕರ್ ಸಿದ್ಧಕಟ್ಟೆ, ಸುದೀಪ್ ಸಾಲ್ಯಾನ್ ರಾಯಿ, ನಿಕೇಶ್ ಕೊಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page