May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕ ರಾಜ್ಯ ಮುಸ್ಲಿಂ ಲೀಗ್ ಇದರ ಮಾಜಿ ಕಾರ್ಯದರ್ಶಿ ಕರೀಮ್ ಕಡಬ ನಿಧನ

ಮಂಗಳೂರು : ಕರ್ನಾಟಕ ರಾಜ್ಯ ಮುಸ್ಲಿಂ ಲೀಗ್ ಇದರ ಮಾಜಿ ಕಾರ್ಯದರ್ಶಿಗಳು, ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಲೀಗ್ ಇದರ ಮಾಜಿ ಅಧ್ಯಕ್ಷರಾದ ಜನಾಬ್ ಎ.ಎಸ್.ಇ. ಕರೀಮ್ ಕಡಬರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 64 ವರ್ಷ ಪ್ರಾಯವಾಗಿದ್ದು ಇವರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿರುತ್ತಾರೆ.

ಇವರು ಕರ್ನಾಟಕ ರಾಜ್ಯ ಎಮ್.ಎಸ್.ಎಫ್. ಹಾಗೂ ಮುಸ್ಲಿಂ ಯೂತ್ ಲೀಗ್ ನ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಇದಲ್ಲದೆ ಲೈಫ್ ಪಬ್ಲಿಶಿಂಗ್ ಟ್ರಸ್ಟ್ ಮಂಗಳೂರು, ಬಾಫಖಿ ತಂಗಳ್ ಫೌಂಡೇಶನ್ ಕರ್ನಾಟಕ ಇದರ ಸ್ಥಾಪಕರು ಆಗಿದ್ದಾರೆ.

ಇವರು ಕರ್ನಾಟಕ ರಾಜ್ಯ ಮುಸ್ಲಿಂ ಲೀಗ್ ನ ಹಿರಿಯ ಸದಸ್ಯರಾಗಿದ್ದು ಇವರ ನಿಧನಕ್ಕೆ ಮುಸ್ಲಿಂ ಲೀಗ್ ಅಧ್ಯಕ್ಷರಾದ ಪಾಣಕ್ಕಾಡ್ ಸಯ್ಯಿದ್ ಸ್ವಾದಿಖಲೀ ಶಿಹಾಬ್ ತಂಗಳ್, ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯಾಧ್ಯಕ್ಷರಾದ ಪಾಣಕ್ಕಾಡ್ ಸಯ್ಯಿದ್ ಮುನವ್ವರಲೀ ಶಿಹಾಬ್ ತಂಗಳ್, ಮಲಪ್ಪುರಂ ಲೋಕಸಭಾ ಕ್ಷೇತ್ರದ ಸಂಸದರಾದ ಇ.ಟಿ. ಮುಹಮ್ಮದ್ ಬಶೀರ್ ಸಾಹೇಬ್, ಪೊನ್ನಾನಿ ಲೋಕಸಭಾ ಕ್ಷೇತ್ರದ ಸಂಸದರಾದ ಅಬ್ದುಸ್ಸಮದ್ ಸಮದಾನಿ ಸಾಹೇಬ್,  ರಾಮನಾಥಪುರಂ ಲೋಕಸಭಾ ಸಂಸದರಾದ ನವಾಝ್ ಗನಿ ಸಾಹೇಬ್, ರಾಜ್ಯಸಭಾ ಸದಸ್ಯರಾದ ನ್ಯಾಯವಾದಿ ಹಾರಿಸ್ ಬೀರಾನ್ ಸಾಹೇಬ್, ಕರ್ನಾಟಕ ರಾಜ್ಯಾಧ್ಯಕ್ಷರಾದ ಜಾವೇದುಲ್ಲಾ, ಪ್ರಧಾನ ಕಾರ್ಯದರ್ಶಿ ಮೌಲಾನಾ ನೂಹ್ ಸಾಹೇಬ್ ಗುಲ್ಬರ್ಗ, ಕರ್ನಾಟಕ ರಾಜ್ಯ ಉಸ್ತುವಾರಿ ಟಿ.ಪಿ. ಅಶ್ರಫಲೀ ಸಾಹೇಬ್, ಎಮ್.ಎಸ್.ಎಫ್. ರಾಷ್ಟ್ರೀಯ ಅಧ್ಯಕ್ಷರಾದ ಪಿ.ವಿ. ಸಾಜು ಅಹ್ಮದ್ ದೆಹಲಿ, ಕಾಸರಗೋಡು ಶಾಸಕರಾದ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕರಾದ ಎ.ಕೆ.ಎಂ. ಅಶ್ರಫ್, ಬಾಫಖಿ ತಂಗಳ್ ಫೌಂಡೇಶನ್ ಕರ್ನಾಟಕ ಅಧ್ಯಕ್ಷರಾದ ಡಾ. ಶೇಖ್ ಬಾವ ಹಾಜಿ ಮಂಗಳೂರು, ಮುಸ್ಲಿಂ ಲೀಗ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಸಿ. ಅಬ್ದುರ್ರಹ್ಮಾನ್ ಮಂಗಳೂರು, ಪ್ರಧಾನ ಕಾರ್ಯದರ್ಶಿ ನೌಶಾದ್ ಮಲಾರ್, ಕೋಶಾಧಿಕಾರಿ ರಿಯಾಝ್ ಹರೇಕಳ, ಮುಸ್ಲಿಂ ಲೀಗ್ ಹಿರಿಯ ಮುಖಂಡರಾದ ಅಡ್ವಕೇಟ್ ಎಸ್. ಸುಲೈಮಾನ್ ಮಂಗಳೂರು, ಇಬ್ರಾಹಿಂ ಹಾಜಿ ಬೆಂಗರೆ, ಎಚ್. ಇಸ್ಮಾಯಿಲ್,  ಮುಸ್ಲಿಂ ಲೀಗ್ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಧ್ಯಕ್ಷರಾದ ಫಯಾಝ್ ಜೆಪ್ಪು, ಸಿದ್ಧೀಖ್ ಅಬ್ದುಲ್ ಖಾದರ್ ಬಂಟ್ವಾಳ, ಅಬ್ದುರ್ರಹ್ಮಾನ್ ದಾರಿಮಿ ತಬೂಕ್, ಮಾಜಿ ಕಾರ್ಯದರ್ಶಿಗಳಾದ ಇಸ್ಮಾಯಿಲ್ ಬಿ.ಸಿ. ರೋಡ್, ಮುಸ್ಲಿಂ ಯೂತ್ ಲೀಗ್ ಜಿಲ್ಲಾಧ್ಯಕ್ಷರಾದ ಹನೀಫ್ ಕುಂಜತ್ತೂರು, ಮುಖಂಡರಾದ ಶಬೀರ್ ತಲಪಾಡಿ, ನಿಸಾರ್ ಬೆಂಗರೆ, ಸಿದ್ದೀಖ್ ಹಿರಿಯ ಮುಸ್ಲಿಂ ಲೀಗ್ ಮುಖಂಡ ಕೆ.ಎಸ್.ಎಚ್. ಹಾಜಿ ಹಮೀದ್ ಕೊರಂದೂರು, ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಮುಸ್ತಫಾ ಅಲೀ ಬೆಂಗಳೂರು, ಸಯ್ಯಿದ್ ಸಿದ್ದೀಖ್ ತಂಗಳ್ ಬೆಂಗಳೂರು, ಮುಸ್ಲಿಂ ಯೂತ್ ಲೀಗ್ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿರಾಜುದ್ಧೀನ್ ನದ್ವಿ ಉತ್ತರ ಪ್ರದೇಶ, ಮುಸ್ಲಿಂ ಲೀಗ್ ಜಿಲ್ಲಾ ಉಪಾಧ್ಯಕ್ಷರಾದ ಸಯ್ಯಿದ್ ಬಂಗೇರುಕಟ್ಟೆ, ಎಂ.ಎಸ್. ಸಿದ್ದೀಖ್ ಫರಂಗಿಪೇಟೆ,  ಎಮ್.ಎಸ್.ಎಫ್. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಝುಲ್ಛಿಕರ್ ಅಲೀ ಎಚ್. ಕಲ್ಲು, ಕಾರ್ಯದರ್ಶಿ ಅನಸ್ ಗೂಡಿನಬಳಿ, ಕೋಶಾಧಿಕಾರಿ ಇರ್ಶಾನ್ ಸವಣೂರು ಲತೀಫ್ ಕುಂಡಾಲ ಮತ್ತಿತ್ತರರು ತೀವ್ರ ಸಂತಾಪ ಸೂಚಿಸಿರುತ್ತಾರೆ .

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page