September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇವಮಾತಾ ಚರ್ಚ್ ಮೊಗರ್ನಾಡ್ ಇದರ 250ನೇ ವರ್ಷಾಚರಣೆಗೆ ಚಾಲನೆ

ವಿಟ್ಲ: ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಮಂಗಳೂರು ಧರ್ಮಕ್ಷೇತ್ರದ ಅಮ್ಟೂರು ಗ್ರಾಮದ ಮೊಗರ್ನಾಡ್ ದೇವಮಾತಾ ಧರ್ಮಕೇಂದ್ರದ 250ನೇ ವರ್ಷಾಚರಣೆಗೆ ಮೊಗರ್ನಾಡ್ ಚರ್ಚ್ ನಲ್ಲಿ ಡಿಸೆಂಬರ್ 24ರಂದು ರಾತ್ರಿ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.

ಈ ದಿವ್ಯ ಸಮಾರಂಭದಲ್ಲಿ ಮಂಗಳೂರು ಸೈಂಟ್ ಜೋಸೆಫ್ ಇಂಜಿನೀಯರಿಂಗ್ ಕಾಲೇಜಿನ ನಿರ್ದೇಶಕರಾದ ವಂದನೀಯ ಫಾದರ್ ವಿಲ್ಫ್ರೆಡ್ ಪ್ರಕಾಶ್ ಡಿಸೋಜ ಇವರು ಚರ್ಚ್ ನ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲಿಗೆ ಚಾಲನೆ ನೀಡಿದರು. ಚರ್ಚ್ ವ್ಯಾಪ್ತಿಯ ಭಕ್ತರು ಐತಿಹಾಸಿಕ ಕ್ಷಣವನ್ನು ಸ್ಮರಣೀಯಗೊಳಿಸುವ ಜತೆಗೆ ಏಕತೆ, ನಂಬಿಕೆ ಮತ್ತು ಕೃತಜ್ಞತೆಯ ಸಂಕೇತವಾಗಿ 250 ಕ್ಯಾಂಡಲ್‌ಗಳನ್ನು 250 ಸಂಖ್ಯೆಯ ಆಕಾರದಲ್ಲಿ ಜೋಡಿಸಿ ಬೆಳಗಿಸಿ ಸಂಭ್ರಮಿಸಿದರು.

ಮೊಗರ್ನಾಡ್ ಚರ್ಚ್ ಪ್ರಧಾನ ಧರ್ಮಗುರು ವಂದನೀಯ ಫಾದರ್ ಅನಿಲ್ ಕೆನ್ಯುಟ್ ಡಿಮೆಲ್ಲೊ ಇವರು ವರ್ಷಪೂರ್ತಿ ನಡೆಯುವ 250ನೇ ವರ್ಷಾಚರಣೆ ಕಾರ್ಯಕ್ರಮದ ಪಟ್ಟಿಯನ್ನು ಅನಾವರಣಗೊಳಿಸಿದರು. ಆವರಣೆ ಹಾಗೂ ಕೃತಜ್ಞತೆಯಾಗಿ ವರ್ಷಾಚರಣೆಯ ಥೀಮ್ ಹಾಡನ್ನು ಪ್ರಸ್ತುತ ಪಡಿಸಲಾಯಿತು.

ಐತಿಹಾಸಿಕ ವರ್ಷಾಚರಣೆಯಲ್ಲಿ ಆಧ್ಯಾತ್ಮಿಕತೆ, ಸಮುದಾಯ ಸಂಘಟನೆ, ಸಾಂಸ್ಕೃತಿಕ ವೈಭವ ಸೇರಿದಂತೆ ಚರ್ಚ್ ನ ಗೌರವಯುತ ಪರಂಪರೆಯನ್ನು ಮುಂದುವರಿಸುವ ದೃಷ್ಟಿಯಿಂದ ಹತ್ತಾರು ಕಾರ್ಯಕ್ರಮಗಳನ್ನು ನಡೆಸುವ ಕುರಿತು ಈ ಸಂದರ್ಭದಲ್ಲಿ ವಿವರಿಸಲಾಯಿತು. ಸಂಭ್ರಮಾಚರಣೆಯಲ್ಲಿ ಸರ್ವರೂ ಪಾಲ್ಗೊಂಡು ಮುಂಬರುವ ಪ್ರತಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ಸಹಕರಿಸಲು ವಿನಂತಿಸಲಾಯಿತು.

ಕಾರ್ಯಕ್ರಮದಲ್ಲಿ ದೇವ ಮಾತ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ನವೀನ್ ಪ್ರಕಾಶ್ ಪಿಂಟೋ, ವಂದನೀಯ ಫಾದರ್ ಓಸ್ಟಿನ್ ಫೆರ್ನಾಂಡಿಸ್, ವಂದನೀಯ ಡಿಕನ್ ಮೆಲ್ವಿನ್ ಡಿಕುನ್ಹಾ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂತೋಷ್ ಡಿಸೋಜ, ಕಾರ್ಯದರ್ಶಿ ವಿಲ್ರೆಡ್ ಲೋಬೊ, ಸರ್ವ ಆಯೋಗಗಳ ಸಂಚಾಲಕಿ ಎಮಿಲಿಯಾ ಡಿಕುನ್ಹಾ ಹಾಗೂ ಜ್ಯುಬಿಲಿ ಸಂಚಾಲಕ ನವೀನ್ ರಾಜೇಶ್ ಡಿಕುನ್ಹಾ ಉಪಸ್ಥಿತರಿದ್ದರು. ಸಾವಿರಾರು ಭಕ್ತಾಧಿಗಳು 250ನೇ ವರ್ಷಾಚರಣೆಯ ಚಾಲನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

 

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page