September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ

ಬೆಂಗಳೂರು: ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ. ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದು ಘೋಷಿಸಲಾಗಿದೆ. ಆಸ್ತಿ ವಿವರ ನೀಡುವಂತೆ ಈ ಸದಸ್ಯರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಯಾವುದೇ ಉತ್ತರ ನೀಡದ ಕಾರಣ ಸದಸ್ಯತ್ವ ರದ್ದು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಅತ್ತಿಕೂಡಿಗೆ ಗ್ರಾಮ ಪಂಚಾಯತ್ ನ ಚೈತ್ರ ರಘು, ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮ ಪಂಚಾಯತ್ ನ ಎಸ್.ಹೆಚ್. ಚಂದ್ರಶೇಖರ, ಕಲಬುರಗಿ ಜಿಲ್ಲೆ ಆಳಂದ ತಾಲೂಕು ಅಳಂಗಾ ಗ್ರಾಮ ಪಂಚಾಯತ್ ನ ಗಣಪತಿ, ಕಮಲಾಪುರ ತಾಲೂಕು ವಿ.ಕೆ. ಸಲಗರ ಗ್ರಾಮ ಪಂಚಾಯಿತಿಯ ಇಸ್ಮಾಯಿಲ್ ಖಾನ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಚಿಕ್ಕಾಂಶಿ ಹೊಸೂರು ಗ್ರಾಮ ಪಂಚಾಯಿತಿಯ ಮಂಜುಳಾ ರಾಜಪ್ಪ, ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಕಳಕೇರಿ ಗ್ರಾಮ ಪಂಚಾಯಿತಿಯ ಬಿ.ವಿ. ಪ್ರಮೀಳಾ ಅವರನ್ನು ಗ್ರಾಮ ಪಂಚಾಯತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳಡಿ ಆಸ್ತಿ ಘೋಷಣೆ ಮಾಡಿಕೊಳ್ಳದ ಸದಸ್ಯರ ಸದಸ್ಯತ್ವ ರದ್ದತಿಗೆ ಅವಕಾಶವಿದ್ದು, ಈ ಕಾಯ್ದೆ ಬಳಸಿಕೊಂಡು ರಾಜ್ಯ ಚುನಾವಣಾ ಆಯೋಗ 6 ಮಂದಿ ಸದಸ್ಯರನ್ನು ಅನರ್ಹಗೊಳಿಸಿದೆ. ಈ ಸದಸ್ಯ ಸ್ಥಾನಗಳು ಖಾಲಿ ಎಂದು ಘೋಷಣೆ ಮಾಡಲಾಗಿದೆ.

 

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page