July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾರ್ವಜನಿಕರೇ ಗಮನಿಸಿ – ಸರಕಾರಿ ಸ್ವತ್ತು ಕಬಳಿಸಿದರೆ ಜೈಲು ಗ್ಯಾರಂಟಿ

ರಾಜ್ಯದಲ್ಲಿ ಸರ್ಕಾರಿ ಸ್ವತ್ತು ಅಕ್ರಮವಾಗಿ ಆಕ್ರಮಿಸಿಕೊಳ್ಳೋದು, ಮಾರಾಟ ಮಾಡೋದು, ಕಬಳಿಸೋದು, ಸ್ವಾಧೀನ ಮಾಡೋದು ಅಪರಾಧ. ಆ ಎಲ್ಲಾ ಅಪರಾಧಗಳಿಗೆ ಸಾರ್ವಜನಿಕರಿಗೆ ಏನೆಲ್ಲ ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ. ಈ ಸಂಬಂಧ ಕರ್ನಾಟಕ ಭೂ ಕಂದಾಯ ಅಧಿನಿಯ 1964ರ 192-ಎ ಅಡಿಯಲ್ಲಿ ಸರ್ಕಾರಿ ಸ್ವತ್ತಿನ ಕುರಿತಂತೆ ಮಹತ್ವದ ಮಾಹಿತಿ ನೀಡಲಾಗಿದೆ. ಈ ಕಾಯ್ದೆಯಲ್ಲಿ ಏನೇ ಒಳೊಳಗೊಂಡಿದ್ದರೂ ಅಥವಾ ನಿಯಮಗಳು ಏನೇ ಇದ್ದರೂ ಯಾವನೊಬ್ಬ ವ್ಯಕ್ತಿ, ಈ ಕೆಳಗಿನ ಪಟ್ಟಿ ಕಲಂ (2) ರಲ್ಲಿ ನಿರ್ದಿಷ್ಟ ಪಡಿಸಲಾದ ಅಪರಾಧ ಎಸಗಿದರೇ ನ್ಯಾಹಿಕ ದಂಡಾಧಿಕಾರಿಗಳು ಪ್ರಥಮ ದರ್ಜೆಯವರಿಂದ ವಿಚಾರಣೆ ನಡೆಸಿ ಈ ಕೆಳಗಿನಂತೆ ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ.

ಸರ್ಕಾರಿ ಸ್ವತ್ತನ್ನು ಅಕ್ರಮವಾಗಿ ಆಕ್ರಮಿಸಿ, ಸರ್ಕಾರಿ ಸ್ವತ್ತೆಂದು ಗೊತ್ತಿದ್ದು ಹೊಂದಿದ್ದರೇ, ಪರಂತು ಈ ಮೇಲ್ಕಂಡ ಉಪಬಂಧವು ಜಮ್ಮಾ ಕೊಡಗು ಜಿಲ್ಲೆಯಲ್ಲಿನ ಭಾನೆ ಸ್ವತ್ತುಗಳು ಮತ್ತು ಕಲಮು 94ಎ, 94ಬಿ ಮತ್ತು 94ಸಿ ರಡಿಯಲ್ಲಿ ಸ್ಥಾಪಿಸಲಾದ ಸಮಿತಿಗಳ ಮುಂದೆ ಕ್ರಮಬದ್ಧಗೊಳಿಸಲು ಅರ್ಜಿಗಳು ವಿಲೇ ಇದ್ದರೆ ಅನ್ವಯವಾಗತಕ್ಕದ್ದಲ್ಲ ಎಂದಿದೆ. ಈ ಮೇಲಿನ ಅಪರಾಧಕ್ಕೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡವನ್ನು ವಿಧಿಸಬಹುದಾಗಿದೆ.

ಸರ್ಕಾರಿ ಸ್ವತ್ತನ್ನು ಮಾರಾಟ ಮಾಡಲು, ಅಡಮಾನ ಮಾಡಲು, ದಾನದ ಮೂಲಕ ಹಸ್ತಾಂತರಿಸಲು ದಸ್ತಾವೇಜುಗಳನ್ನು ಸೃಷ್ಠಿಸಿ ವಂಚಿಸಿದ್ದರೇ 3 ವರ್ಷ ಜೈಲು ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ. ಸರ್ಕಾರಿ ಸ್ವತ್ತನ್ನು ಕಬಳಿಸುವ ಉದ್ದೇಶದಿಂದ ನಕಲಿ ದಾಖಲೆಗಳನ್ನು ಸೃಷ್ಠಿಸಿದ್ದರೇ 3 ವರ್ಷ ಜೈಲು ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.

ಸರ್ಕಾರಿ ಸ್ವತ್ತುಗಳ ಅಕ್ರಮ ಸ್ವಾಧೀನತೆ, ಇವುಗಳ ತೆರವು ಮತ್ತಿತರ ಕಾರ್ಯಗಳನ್ನು ನಿರ್ವಹಿಸಲು ಅಧಿಕೃತನಾದ ಕಂದಾಯ ಅಧಿಕಾರಿ ಕ್ರಮ ಕೈಗೊಳ್ಳಲು ವಿಫಲನಾರೇ 3 ವರ್ಷಗಳ ಕಾರಗೃಹ ವಾಸ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಲಿದೆ. ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಭೂ ಪರಿವರ್ತನೆ ಮಾಡದೆ ಮತ್ತು ಸಂಬಂಧಿಸಿದ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಮಾರಾಟ ಮಾಡಿದರೇ 3 ವರ್ಷಗಳ ಕಾರಾಗೃಹ ವಾಸ ಮತ್ತು 10 ಸಾವಿರ ರೂಪಾಯಿ ದಂಡ ಬೀಳಲಿದೆ.

ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತನೆ ಮಾಡಲು ನಕಲಿ ದಾಖಲೆ ಸೃಷ್ಟಿಸಿದರೆ, 1 ವರ್ಷ ಜೈಲು ಮತ್ತು 5 ಸಾವಿರ ರೂಪಾಯಿ ದಂಡ ವಿಧಸಬಹುದಾಗಿದೆ. ಅಕ್ರಮ ಭೂ ಪರಿವರ್ತನೆ ಮತ್ತು ಕಡತಗಳ ನಿರ್ವಹಣೆ ಮಾಡುವ ಹೊಣೆ ಹೊತ್ತ ಸಾರ್ವಜನಿಕ ನೌಕರ ಅಂತಹ ಹೊಣೆಯನ್ನು ಸಕ್ಷಮ ಪ್ರಾಧಿಕಾರಕ್ಕೆ ವರದಿ ಮಾಡುವ ಕ್ರಮ ಕೈಗೊಳ್ಳಲು ವಿಫಲವಾದರೇ 3 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ. ಈ ಕಾಯ್ದೆಯ ಉಪ ಬಂಧಗಳಿಗೆ ವಿರುದ್ಧವಾಗಿ ಆದೇಶ ಮಾಡಿದ್ದೇ ಆದಲ್ಲಿ ಅಂತಹ ಅಧಿಕಾರಿಯ ವಿರುದ್ಧವೂ 5 ಸಾವಿರ ರೂಪಾಯಿ ದಂಡ ವಿಧಿಸಿ, ನಂತರದ ಅಪರಾಧಗಳಿಗೆ 5 ಪಟ್ಟು ದಂಡವನ್ನು ವಿಧಿಸಬಹುದಾಗಿದೆ.

 

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page