September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಮ್ತಾಝ್ ಆಲಿ ಪ್ರಕರಣದಲ್ಲಿ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

ಮಂಗಳೂರು : ಉದ್ಯಮಿ ಮುಮ್ತಾಝ್ ಆಲಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 6ರಂದು ಸೋಮವಾರ ಸಂಜೆ ಮಂಗಳೂರಿನ ಜೆಎಂಎಫ್ ಸಿ ನ್ಯಾಯಲಯಕ್ಕೆ 600ಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪ್ರಮುಖ ಆರೋಪಿ ಎನ್ನಲಾದ ಸುರತ್ಕಲ್ ಕೃಷ್ಣಾಪುರ ಏಳನೇ ಬ್ಲಾಕ್ ನಿವಾಸಿ ರಹ್ಮತ್ ಮತ್ತು ಆಕೆಯ ಪತಿ ಪ್ರಕರಣದ ಐದನೇ ಆರೋಪಿ ಶುಐಬ್, ಎ2 ಆರೋಪಿ ಅಬ್ದುಲ್ ಸತ್ತಾರ್, ಎ3 ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, ಎ4 ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫ ಹಾಗೂ ಆರನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣದ ತನಿಖಾಧಿಕಾರಿಯಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page