September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೂಳೆ ಸಾಂದ್ರತೆ ತಪಾಸಣೆ ಅತೀ ಅಗತ್ಯ – ಡಾ. ಗೋಪಾಲಕೃಷ್ಣ

ಉಜಿರೆ : ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳುವ ಸಂಭವನೀಯ ಅಪಾಯವನ್ನು ತಡೆಗಟ್ಟಬಹುದು ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಅಭಿಪ್ರಾಯಪಟ್ಟರು.  ಡಾ. ಗೋಪಾಲಕೃಷ್ಣ ಬೆನಕ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವನ್ನು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸುತ್ತಾ ಮಾತನಾಡುತ್ತಿದ್ದರು. ಮೂಳೆ ಸಾಂದ್ರತೆ ಪರೀಕ್ಷೆಯನ್ನು ಮೂಳೆ ಖನಿಜಾಂಶ ಮತ್ತು ಸಾಂದ್ರತೆಯನ್ನು ಅಳೆಯಲು ಬಳಸಲಾಗುತ್ತದೆ.

ಮೂಳೆ ಸಾಂದ್ರತೆಯ ಪರೀಕ್ಷೆಯನ್ನು ಮುಖ್ಯವಾಗಿ ತೆಳುವಾದ, ದುರ್ಬಲ ಮೂಳೆಗಳು ಮತ್ತು ಕಡಿಮೆ ಮೂಳೆ ದ್ರವ್ಯರಾಶಿಯ ಸಮಸ್ಯೆಯನ್ನು ನೋಡಲು ಮಾಡಲಾಗುತ್ತದೆ. ಈ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಬೇಗ ಚಿಕಿತ್ಸೆ ನೀಡಬೇಕು. ಆರಂಭಿಕ ಚಿಕಿತ್ಸೆಯು ಮೂಳೆ ಮುರಿತಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಎಲುಬು ಮತ್ತು ಕೀಲು ಶಾಸ್ತ್ರ ಚಿಕಿತ್ಸಾ ತಜ್ಞ ಡಾ. ರೋಹಿತ್ ಜಿ. ಭಟ್ ತಿಳಿಸಿದರು.

ಡಾ. ಅಂಕಿತಾ ಜಿ. ಭಟ್ ಪ್ರಾರ್ಥಿಸಿ, ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ. ಭಟ್  ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ ದೇವಸ್ಯ ಕಾರ್ಯಕ್ರಮ ನಿರ್ವಹಿಸಿದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವನಿಕರು ಭಾಗವಹಿಸಿದ್ದರು. ಈ ಶಿಬಿರದಲ್ಲಿ ಸುಮಾರು 120 ಜನ ಪಾಲ್ಗೊಂಡು ತಮ್ಮ ಮೂಳೆ ತಪಾಸಣೆ ಮಾಡಿಸಿಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ಪಡೆದರು.  ಡಾ. ಭಾರತಿ ಜಿ.ಕೆ. ವಂದಿಸಿದರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page